ಹೆರೋದನ ಬಳಿಗೆ ಹಿಂದಿರುಗಬಾರದೆಂದು ಕನಸಿನಲ್ಲಿ ದೈವಾಜ್ಞೆಯಾದ್ದರಿಂದ, ಅವರು ಬೇರೆ ಮಾರ್ಗವಾಗಿ ತಮ್ಮ ದೇಶಕ್ಕೆ ಮರಳಿದರು.
ಜ್ಯೋತಿಷಿಗಳು ಹೊರಟುಹೋದ ಮೇಲೆ ದೇವದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪುನಃ ಹೇಳುವ ತನಕ ಅಲ್ಲೇ ಇರು,” ಎಂದನು.