ದೇವರು ನಿನಗೆ ಆಕಾಶದ ಮಂಜನ್ನೂ,
ಸಾರವುಳ್ಳ ಭೂಮಿಯನ್ನೂ ಕೊಟ್ಟು
ದವಸಧಾನ್ಯಗಳನ್ನೂ, ದ್ರಾಕ್ಷಾರಸವನ್ನೂ ಹೇರಳವಾಗಿ ಅನುಗ್ರಹಿಸಲಿ.
ಜನಗಳು ನಿನ್ನನ್ನು ಆರಾಧಿಸಲಿ,
ಜನಾಂಗಗಳು ನಿನಗೆ ಅಧೀನವಾಗಲಿ.
ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು,
ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ.
ನಿನ್ನನ್ನು ಶಪಿಸುವವರಿಗೆ ಶಾಪವೂ,
ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ” ಎಂದನು.